Monday, January 23, 2012

ದೇವ್ರೇ ಆಗ್ಬಿಡು

ದೇವ್ರು ಅಂತ ಯಾಕೆ ನಿಂಗೆ ಕೈಯ ಮುಗಿಬೇಕು
ಏನು ಕಿಸ್ದಿದ್ದೀ ಅಂತ ಆರತಿ ಬೆಳಗಬೇಕು

ಇರೋ ಕಷ್ಟ ಇದ್ದೆ ಇದೆ ,ನಮಗೇನ್ ಹೊಸದಲ್ಲ
ನೋಡ್ಕಂಡ್ ಸುಮ್ನೆ ಕುಂತ್ಕಂಡಿದ್ದೀ ನಿಂಗೆ ಕಣ್ಣಿಲ್ಲ

ನೀನು ಬರಿ ಕಲ್ಲು ಅಂತ ತಿಳಿದೋರ್ ಹೇಳ್ತಾರೆ
ಅದರೂ ಜನ ಕಷ್ಟ ಅಂದ್ರೆ, ನಿಂಗೆ ಅಡ್ಡ ಬೀಳ್ತಾರೆ

ಜಾತಿಗೊಂದು ಮಠ ಮಾಡಿ ನಿನ್ ದಯೆ ಅಂತಾರೆ
ಧರ್ಮಕ್ಕಿಷ್ಟು ವಿಷ ಬೆರಸಿ ,ಜನಗಳ್ ನೆತ್ತಿ ಸವರ್ತಾರೆ

ಅನ್ನ ಕೊಡೋನ ಬಾಯಿಗೆ ಹಿಡಿ ಮಣ್ಣು ಹಾಕ್ತಾರೆ
ಅವನ ಎದೆ ಮೇಲೆ ರಸ್ತೆ ಮಾಡಿ ನೈಸು ಅಂತಾರೆ

ಒಳಗೊಳಗೆ ದುಷ್ಟರ ಜೊತೆ ಶಾಮೀಲ್ ಆಗ್ಬಿಟ್ಯ
ಪರ್ಸ0ಟೇಜು ಲೆಕ್ಕದಲ್ಲಿ ನೀನು ಡೀಲಿಗ್ ಕುಂತಬಿಟ್ಯ


ಈ ಹಲ್ಕಟ್ ಮಂದಿ ಜೊತೆ ಸೇರಿ ಹಾಳಾಗ್ ಹೋಗ್ಬಿಟ್ಟೆ
ಗ್ರಾನೈಟ್ ಹಾಸಿದ್ ನೆಲದ ಮೇಲೆ ನಿಂತ್ಕಂಡ್ ಹೈಟೆಕ್ ಆಗ್ಬಿಟ್ಟೆ

ಹಿಂಗೆ ಮಾಡ್ತಾ ಹೋದ್ರೆ ನಿಂಗೆ ಕಷ್ಟ ಆಗ್ತದೆ
ಬಡವರ ಸಿಟ್ಟು ರಟ್ಟೆಗೆ ಬಂದ್ರೆ ನಿನ್ ಮಾನ ಹೋಯ್ತದೆ

ಛಿ ಥೂ ಅನ್ನೋಕ್ ಮುಂಚೆ ಒಳ್ಳೆರ್ಗೆ ಒಳ್ಳೇದ್ ಮಾಡ್ಬಿಡು
ಕೆಟ್ಟವರಿಗೆ ಒಂದ್ ದಾರಿ ತೋರ್ಸಿ ದೇವ್ರೇ ಆಗ್ಬಿಡು

- ಗುರುರಾಜ್ 

No comments:

Post a Comment